Author: Santhosh Bagilagadde

Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.

ಈ ವಿಚಾರ ನಿಮಗೆ ವಿಚಿತ್ರ ಅನ್ನಿಸಬಹುದು. ಆದರಿದು ಕಠೋರ ಸತ್ಯ. ನಮ್ಮ ನಿಲುಕಿಗೆ ಸಿಕ್ಕಂತೆ ಶಾರ್ಕ್‍ಗಳು, ಹಾವುಗಳಿಂದಾಗಿ ಒಂದಷ್ಟು ಜನ ಸಾಯ್ತಾರೆ ಅಂದ್ಕೋತೀವಿ. ಆದ್ರೆ ಅದು ಸುಳ್ಳು. ಹಾಗಂತ ವರ್ಷಗಟ್ಟಲೆ ವಿಶ್ವದ ನಾನಾ ಭಾಗಗಳನ್ನ ಗಮನದಲ್ಲಿಟ್ಟುಕೊಂಡು ನಡೆಸಿರೋ ವರದಿಯೇ ಸ್ಪಷ್ಟಪಡಿಸಿದೆ. ಹಾಗಾದ್ರೆ ಯಾವುದರಿಂದ ಹೆಚ್ಚಿನ ಜನ ಅಕಾಲ ಮರಣಕ್ಕೀಡಾಗ್ತಾರೆ ಅನ್ನೋ ಪ್ರಶ್ನೆ ಸಹಜಾನೇ. ಅದಕ್ಕುತ್ತರವಾಗಿ ನಿಲ್ಲೋದು ಸೊಳ್ಳೆಗಳು. ಬಹುಶಃ ಈ ಸೊಳ್ಳೆಗಳ ಹಾವಳಿ ಇಲ್ಲದ ಭೂಪ್ರದೇಶಗಳೇ ಅಪರೂಪವೇನೋ. ಅಷ್ಟು ದೊಡ್ಡ ಪ್ರಮಾಣದಲ್ಲಿ ಸೊಳ್ಳೆಗಳು ವಿಶ್ವವನ್ನೆಲ್ಲ ವ್ಯಾಪಿಸಿಕೊಂಡಿವೆ. ಗಮನೀಯ ಅಂಶ ಅಂದ್ರೆ ಅದ್ರ ಎಲ್ಲ ಪ್ರಭೇದಗಳೂ ಕೂಡಾ ಡೆಡ್ಲಿ ಗುಣ ಲಕ್ಷಣಗಳನ್ನೇ ಒಳಗೊಂಡಿವೆ. ವಿಶ್ವದ ತುಂಬೆಲ್ಲ ಇಂಥ ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಲು ಜನ ಹರಸಾಹಸ ಪಡ್ತಿದ್ದಾರೆ. ಆದರೂ ಕೂಡಾ ಅದರಲ್ಲಿ ಸಂಪೂರ್ಣ ಯಶ ಕಾಣಲಾಗ್ತಿಲ್ಲ. ಈ ಕಾರಣದಿಂದಲೇ ಪ್ರತೀ ವರ್ಷ ಏನಿಲ್ಲವೆಂದರೂ ಐವತ್ತು ಸಾವಿರದಷ್ಟು ಜನ ಸೊಳ್ಳೆಗಳಿಂದಾನೇ ಜೀವ ಕಳೆದುಕೊಳ್ತಿದ್ದಾರಂತೆ. ಒಂದು ವರದಿಯ ಪ್ರಕಾರ ಶಾರ್ಕ್ ದಾಳಿಯಿಂದ ಡಜನ್ನಿನಷ್ಟು ಜನ ಜೀವ ಕಳೆದುಕೊಳ್ತಿದ್ದಾರೆ.…

Read More

ನಮ್ಮ ದೇಹದ ಪ್ರತೀ ಅಂಗಾಂಗಗಳಿಗೂ ತಮ್ಮದೇ ಆದ ಮಹತ್ವ ಇದ್ದೇ ಇದೆ. ಅದರಲ್ಲಿ ಒಂದು ಹೆಚ್ಚು ಒಂದು ಕಡಿಮೆ ಅನ್ನೋದು ಇಲ್ಲವೇ ಇಲ್ಲ. ಅದರಲ್ಲೊಂದಕ್ಕೆ ತೊಂದರೆಯಾದರೂ ಕೂಡಾ ಇಡೀ ದೇಹದ ಒಟ್ಟಾರೆ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತೆ. ಅದರಲ್ಲಿಯೂ ಮೂಗಂತೂ ಕೇವಲ ಆಘ್ರಾಣಿಸೋದಕ್ಕೆ, ಉಸಿರಾಡೋದಕ್ಕೆ ಮಾತ್ರವಲ್ಲದೇ ಬಾಹ್ಯ ಸೌಂದರ್ಯದಲ್ಲಿಯೂ ಪ್ರಧಾನ ಪಾತ್ರ ವಹಿಸುತ್ತೆ. ಅವರಿವರ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡೋದಕ್ಕೆ ಮೂಗು ತೂರಿಸೋದು ಅನ್ನೋ ವಿಶೇಷಣ ನಮ್ಮ ನಡುವೆ ಚಾಲ್ತಿಯಲ್ಲಿದೆ. ಅದು ಮೂಗಿನ ಮಹತ್ವದ ದ್ಯೋತಕವೂ ಹೌದು. ಆದ್ರೆ ಈ ಮೂಗಿನ ಬಗ್ಗೆ ತಿಳಿದುಕೊಳ್ಳಲೇ ಬೇಕಾದ ಒಂದಷ್ಟು ಇಂಟರೆಸ್ಟಿಂಗ್ ಸಂಗತಿಗಳಿದ್ದಾವೆ. ಅವೆಲ್ಲವೂ ಯಾರಿಗೇ ಆದ್ರೂ ಅಚ್ಚರಿಯುಂಟು ಮಾಡುವಂತಿರೋದು ಸುಳ್ಳಲ್ಲ. ಮೂಗೆಂಬುದು ಮುಖದ ಒಟ್ಟಾರೆ ಸೌಂದರ್ಯದ ಕೇಂದ್ರ ಬಿಂದು. ಅದು ಇರಬೇಕಾದ ಜಾಗದಲ್ಲಿ, ಇಂತಿಷ್ಟೇ ಆಕಾರದಲ್ಲಿದ್ರೆ ಚೆನ್ನ. ಆ ಮೂಗಿನಲ್ಲಿಯೂ ನಾನಾ ವೆರೈಟಿಗಳಿರೋದು ಕಣ್ಣ ಮುಂದಿನ ಸತ್ಯ. ಈ ಕಾರಣದಿಂದಾನೆ ಪುಟ್ಟ ಮಕ್ಕಳ ಮೂಗನ್ನು ಕೊಂಚ ವಿಶೇಷವಾಗಿಯೇ ತಿದ್ದಿ ತೀಡುವ ಪರಿಪಾಠ ಚಾಲ್ತಿಯಲ್ಲಿದೆ.…

Read More

ಪ್ರಕೃತಿಯ ವೈಚಿತ್ರ್ಯಗಳಿಗೆ ಕೊನೆಯೆಂಬುದಿಲ್ಲ. ವಿಜ್ಞಾನ ಅದೆಷ್ಟೇ ಆವಿಷ್ಕಾರಗಳನ್ನ ನಡೆಸಿದರೂ ಅದರ ಕಣ್ಣು ತಪ್ಪಿಸಿಕೊಂಡಿರೋ ಅದೆಷ್ಟೋ ಅದ್ಭುತಗಳು ಈ ಜಗತ್ತಿನಲ್ಲಿವೆ. ನಾವು ಪ್ರಕೃತಿಯನ್ನ ನಮ್ಮ ದೃಷ್ಟಿಗೆ ಸೀಮಿತಗೊಳಿಸಿ ನೋಡುತ್ತೇವೆ. ಆದರೆ ಅದರ ನಿಗೂಢಗಳು ಕಣ್ಣಳತೆಯನ್ನ ಮೀರಿದಂತಿವೆ. ನದಿ ನೀರೆಂದರೆ ತಣ್ಣಗಿರುತ್ತದೆಂಬುದು ನಮ್ಮ ನಂಬಿಕೆ. ಅದನ್ನ ಸುಳ್ಳು ಮಾಡುವಂಥಾ ವರತೆಯೊಂದು ನಮ್ಮದೇ ದೇಶದಲ್ಲಿದೆ. ಆದ್ರೆ ಅಮೇಜಾನಿನ ದಟ್ಟ ಕಾಡಿನ ಒಡಲಲ್ಲೊಂದು ನದಿ ಕೊತ ಕೊತನೆ ಕುದಿಯುತ್ತಾ ಅದೆಷ್ಟೋ ಕಾಲದಿಂದ ಹರಿಯುತ್ತಿದೆ. ಅದು ದಟ್ಟವಾದ ಅಮೇಜಾನ್ ಕಾಡಿನ ಗರ್ಭದಲ್ಲಿರೋ ಅಚ್ಚರಿ. ಆಂಡ್ರ್ಯೂ ರೋeóÉೂೀ ಎಂಬ ಉತ್ಸಾಹಿ ಯುವ ವಿಜ್ಞಾನಿ ಪ್ರಯತ್ನಿಸದಿದ್ದರೆ ಆ ನದಿ ನಿಗೂಢವಾಗಿಯೇ ಉಳಿದು ಬಿಡುತ್ತಿತ್ತೇನೋ… ಆದ್ರೆ ಆತನ ಪರಿಶ್ರಮ, ಕುತೂಹಲದ ಕಾರಣದಿಂದ ಇಂಥಾದ್ದೊಂದು ಪರಮಾಚ್ಚರಿ ಜಗತ್ತಿನೆದುರು ಅನಾವರಣಗೊಂಡಿದೆ. ಅಂಥಾ ಅಪರೂಪದ ನದಿಯ ಗುಣಲಕ್ಷಣಗಳನ್ನ ನೋಡಿದ್ರೆ ಯಾರೇ ಆದ್ರೂ ಅವಾಕ್ಕಾಗದಿರೋಕೆ ಸಾಧ್ಯವೇ ಇಲ್ಲ. ಅಮೇಜಾನ್ ಕಾಡೆಂದರೆ ಅಪಾರ ಜೀವರಾಶಿ, ಯಾವ ಲೆಕ್ಕಕ್ಕೂ ನಿಲುಕದ ಸಸ್ಯ ಸಂಪತ್ತಿನಿಂದ ಕೂಡಿದ ಪ್ರದೇಶ. ಆ ದಟ್ಟಡವಿಯ ತುಂಬಾ ನಿಗೂಢಗಳದ್ದೇ…

Read More

ನಾವು ಅಡಿಗಡಿಗೆ ಹೊರ ಜಗತ್ತಿನ ಅಚ್ಚರಿಗಳತ್ತ ಕಣ್ಣರಳಿಸಿ ನೋಡ್ತೇವೆ. ಅಲ್ಲಿನ ಅಗಾಧ ವಿಸ್ಮಯಗಳನ್ನು ಇಂಚಿಂಚಾಗಿ ನೋಡುತ್ತಾ ಸಖೇದಾಶ್ಚರ್ಯ ಹೊಮ್ಮಿಸ್ತೇವೆ. ಇಡೀ ಜಗತ್ತನ್ನೇ ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತಾಡಿ ನೋಡಲೇ ಬೇಕಾದ ಸ್ಥಳಗಳನ್ನ ಕಣ್ತುಂಬಿಕೊಳ್ಳಲು ಕಾತರರಾಗ್ತೇವೆ. ಆದ್ರೆ ಹಾಗೆ ಹೊರ ಜಗತ್ತಿನತ್ತ ಕಣ್ಣು ಕೀಲಿಸೋದ್ರಲ್ಲಿ ನಮ್ಮದೇ ದೇಹದ ಚಕಿತ ಸಂಗತಿಗಳತ್ತ ಅಸಡ್ಡೆ ತೋರಿಒಸುತ್ತೇವೆ. ನಮ್ಮೊಳಗೇ ನಾವರಿಯದ ಜಗತ್ತೊಂದಿದೆ, ನಮ್ಮ ದೇಹದ ಬಗ್ಗೆಯೇ ತಿಳಿದುಕೊಳ್ಳೋಕೆ ಸಾಕಷ್ಟಿದೆ ಅನ್ನೋ ವಿಚಾರವನ್ನ ಮರೆತೇ ಬಿಡುತ್ತೇವೆ. ನಿಜವಾಗಿ ಹೇಳ್ಬೇಕಂದ್ರೆ ನಮ್ಮೆಲ್ಲ ದೇಹವೇ ಒಂದು ಅದ್ಭುತ ಜಗತ್ತು. ಅದರ ಮೇಲ್ಮೈ ಮತ್ತು ಒಳಗೆಲ್ಲಾ ಅಗೋಚರ ವಿಸ್ಮಯಗಳಿದ್ದಾವೆ. ಅದರಲ್ಲಿ ಹೊಕ್ಕುಳು ಕೂಡಾ ಸೇರಿಕೊಂಡಿದೆ. ಹೊಕ್ಕುಳೆಂದರೆ ಒಂದಷ್ಟು ರೊಮ್ಯಾಂಟಿಕ್ ಕಲ್ಪನೆಗಳಿದ್ದಾವೆ. ಸಿನಿಮಾಗಳಲ್ಲಿಯಂತೂ ರಸಿಕತೆ ಸ್ಫುರಿಸುವಂಥಾ ಸನ್ನಿವೇಶಗಳನ್ನ ನಟೀಮಣಿಯರ ಹೊಕ್ಕುಳ ಸುತ್ತಲೇ ಚಿತ್ರೀಕರಿಸಲಾಗಿದೆ. ಆದ್ರೆ ಅಂಥಾ ಹೊಕ್ಕುಳಲ್ಲಿ ಹೊಕ್ಕಿ ಕೂತಿರಬಹುದಾದ ಬ್ಯಾಕ್ಟೀರಿಯಾಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿರಲಿಕ್ಕಿಲ್ಲ. ಈ ವಿಚಾರ ಗಂಡು ಮತ್ತು ಹೆಣ್ಣಿಗೂ ಅನ್ವಯಿಸುತ್ತೆ. ಇತ್ತೀಚೆಗೆ ಹೊರ ಬಂದಿರೋ ಒಂದು ಸಂಶೋಧನೆಯ ಪ್ರಕಾರವಾಗಿ…

Read More

ಆಧುನಿಕತೆಯ ಭರಾಟೆಯಲ್ಲಿ ಎಲ್ಲವೂ ಶೋಕಿಯ ವಸ್ತುಗಳಾಗಿ ಹೋಗಿವೆ. ಕಾಫಿ, ಟೀ, ಪಾನಕಗಳ ಜಾಗವನ್ನು ಆಕರ್ಷಕ ಪಾನೀಯಗಳು ಒಂದೇ ಸಮನೆ ಓವರ್‍ಟೇಕ್ ಮಾಡಿ ಬಿಟ್ಟಿವೆ. ಸಿ, ಕೋಕಕೋಲಾದಂಥಾ ಪಾನೀಯಗಳಿಗೆ ಜನ ಮನಸೋತಿದ್ದಾರೆ. ತೀರಾ ಊಟ ತಿಂಡಿಯ ಸಂದರ್ಭದಲ್ಲಿಯೂ ಅವುಗಳನ್ನೇ ಗುಟುಕರಿಸುವಷ್ಟು ಅಡಿಕ್ಟ್ ಆಗಿಬಿಟ್ಟಿದ್ದಾರೆ. ನಮ್ಮ ನಡುವೆ ಜಂಕ್ ಫುಡ್ ಕಲ್ಚರ್ ಬೆಳೆದುಕೊಂಡಿದೆಯಲ್ಲಾ? ಅದಕ್ಕೆ ಇಂಥ ಪಾನೀಯಗಳು ಪಕ್ಕಾ ಸಾಥ್ ಕೊಡುತ್ತಿವೆ. ಅದೇ ಹೊತ್ತಲ್ಲಿ ಈ ಪಾನೀಯಗಳು ಅದೆಷ್ಟು ಡೇಂಜರಸ್ ಅನ್ನೋದರ ಬಗ್ಗೆಯೂ ಶೋಧನೆಗಳು ನಡೆದಿವೆ. ಹಲವಾರು ಪ್ರಯೋಗಗಳ ಮೂಲಕ ಅವುಗಳ ಭೀಕರ ಸ್ವರೂಪವನ್ನು ಜಾಹೀರು ಮಾಡಲಾಗಿದೆ. ಆದರೂ ಜನ ಮಾತ್ರ ಅದರ ಗುಂಗಿನಿಂದ ಹೊರಬಂದಿಲ್ಲ. ಹೀಗೆ ಜನರನ್ನು ಮೋಡಿಗೀಡು ಮಾಡಿರೋ ಪಾನೀಯಗಳಲ್ಲಿ ಮೌಂಟೈನ್ ಡಿವ್ ಕೂಡಾ ಸೇರಿಕೊಂಡಿದೆ. ಆನ ಈ ಪಾನೀಯಾಕ್ಕೂ ಮಾರು ಹೋಗಿದ್ದಾರೆ. ಅದರ ಭೀಕರ ಸ್ವರೂಪ ಎಂಥಾದ್ದೆಂಬುದನ್ನು ಇದೀಗ ಸಂಶೋಧಕರೇ ತೆರೆದಿಟ್ಟಿದ್ದಾರೆ. ಈ ಪಾನೀಯದಲ್ಲಿ ಕಟ್ಟುಮಸ್ತಾದ ಇಲಿಯನ್ನು ನೆನೆಸಿಟ್ಟರೆ ಅದು ನೋಡ ನೋಡುತ್ತಲೇ ಸಂಪೂರ್ಣವೆಂಬಂತೆ ಕರಗಿ ಹೋಗುತ್ತೆ. ಹಾಗಾದ್ರೆ ಅದರಲ್ಲಿ…

Read More

ಇದು ದಿನದ ಇಪ್ಪತ್ನಾಲಕ್ಕು ಗಂಟೆಯೂ ಸುದ್ದಿಗಳ ಗಿರಣಿ ಚಾಲೂ ಇರುವ ದಿನಮಾನ. ಲೆಕ್ಕವಿರದಷ್ಟು ಟೀವಿ ಚಾನೆಲ್‍ಗಳು ದಂಡಿ ದಂಡಿ ಸುದ್ದಿಗಳನ್ನ ಹೆಕ್ಕಿ ತೆಗೆಯುತ್ತವೆ. ಪತ್ರಿಕೆಗಳೂ ಕೂಡಾ ಅನಾದಿ ಕಾಲದಿಂದಲೂ ಆ ಕೆಲಸ ಮಾಡ್ತಾನೇ ಬಂದಿವೆ. ಅದೂ ಸಾಲದೆಂಬಂತೆ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿಯೂ ಸುದ್ದಿಗಳ ಭರಾಟೆ ಮೇರೆ ಮೀರಿದೆ. ಒಟ್ಟಾರೆಯಾಗಿ ಈಗ ಸುದ್ದಿಗಳದ್ದೇ ಗೌಜು ಗದ್ದಲ. ಇಂಥಾ ಸುದ್ದಿಗಳ ಭರಾಟೆಯಲ್ಲಿ ಒಂದು ದಿನ ಸುದ್ದಿಗಳು ಕಡಿಮೆಯಿದ್ದರೆ ಮಾಧ್ಯಮಗಳ ಪಾಡೇನು ಅನ್ನೋ ಕ್ಯೂರಿಯಾಸಿಟಿ ಕಾಡುತ್ತೆ. ಒಂದಷ್ಟು ಮಂದಿಯಾದ್ರೂ ಅದರ ಬಗ್ಗೆ ಆಲೋಚಿಸಿರ್ತಾರೆ. ಒಂದು ವೇಳೆ ಯಾವ ಸುದ್ದಿಯೂ ಇಲ್ಲದೇ `ಇಂದು ಸುದ್ದಿಗಳಿಲ್ಲ’ ಅಂತ ಅನೌನ್ಸ್ ಮಾಡಬೇಕಾಗಿ ಬಂದರೆ ಹೇಗಿರಬಹುದನ್ನೋದು ಕಲ್ಪನೆಗೂ ನಿಲುಕೋದಿಲ್ಲ. ಆದರೆ ತಂತ್ರಜ್ಞಾನ ತುಂಬಾನೇ ಹಿಂದುಳಿದಿದ್ದ ಕಾಲದಲ್ಲಿ ಒಂದೇ ಒಂದು ಸಲ ಅಂಥಾ ಕಲ್ಪನೆ ನಿಜವಾಗಿತ್ತಂತೆ. ಅದು ಕಳೆದ ಶತಮಾನದ ಆರಂಭಿಕ ದಿನಗಳು. ರೇಡಿಯೋಗಳೇ ಆಗಿನ ಸುದ್ದಿ ಸಂಗಾತಿಗಳು. ಆ ಕಾಲಕ್ಕೆ ಬಿಬಿಸಿ ರೇಡಿಯೋ ಜಗದ್ವಿಖ್ಯಾತಿ ಗಳಿಸಿತ್ತು. 1930ರ ಏಪ್ರಿಲ್ ಹದಿನೆಂಟನೇ ತಾರೀಕಿನಂದು…

Read More

ಟೊಮ್ಯಾಟೋ ಕೆಚಪ್ ಅಂದ್ರೆ ಬಹುತೇಕರ ಬಾಯಲ್ಲಿ ನೀರೂರುತ್ತೆ. ಅದು ನಾನಾ ಆಹಾರಗಳಿಗೆ ಬೆಸ್ಟ್ ಕಾಂಬಿನೇಷನ್ ಅಂತಲೇ ಈವತ್ತಿಗೆ ಫೇಮಸ್ಸು. ಅದರ ಕಾರಣದಿಂದಲೇ ನಾನಾ ತಿನಿಸುಗಳ ರುಚಿ ದುಪ್ಪಟ್ಟಾಗುತ್ತೆ. ಈ ರುಚಿಯ ಕಾರಣದಿಂದಲೇ ಕೆಚಪ್ ಅನ್ನೋದು ವಿಶ್ವಾದ್ಯಂತ ಆಹಾರಪ್ರಿಯರ ಹಾಟ್ ಫೇವರಿಟ್ ಆಗಿ ಬಿಟ್ಟಿದೆ. ಹೀಗೆ ನಾವೆಲ್ಲ ಚಪ್ಪರಿಸಿ ತಿನ್ನೋ ಕೆಚಪ್ ಹಿಂದೆ ಅಚ್ಚರಿದಾಯಕ ಹಿಸ್ಟರಿಯಿದೆ. ಯಾರಿಗೇ ಆದ್ರೂ ನಂಬಲು ತುಸು ಕಷ್ಟವಾಗುವಂಥ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳೂ ಇದ್ದಾವೆ. ಈಗ ನಮ್ಮ ಆಹಾರದ ಭಾಗವಾಗಿರೋ ಟೊಮ್ಯಾಟೋ ಕೆಚಪ್ ಒಂದು ಕಾಲದಲ್ಲಿ ನಾನಾ ಕಾಯಿಲೆಗಳಿಗೆ ಔಷಧಿಯಂತೆ ಬಳಕೆಯಾಗ್ತಿತ್ತಂತೆ.ಅದುವರೆಗೂ ಆಹಾರವಾಗಿದ್ದ ಟೊಮ್ಯಾಟೋಗೆ ಔಷಧಿಯ ಖದರ್ ತಂದು ಕೊಟ್ಟಾತ ಡಾ. ಜಾನ್ ಕೂಕ್ ಬೆನೆಟ್ ಎಂಬಾತ. 1834ರಲ್ಲಿ ಬೆನೆಟ್ ನಾನಾ ರೋಗಗಳಿಗೆ ಮದ್ದಾಗಿ ಟೊಮ್ಯಾಟೋ ಕೆಚಪ್ ಅನ್ನು ಸಿದ್ಧಪಡಿಸಿದ್ದನಂತೆ. ಅದರಲ್ಲಿ ವಿಟಮಿನ್ಸ್ ಮತ್ತು ಆಂಟಿ ಆಕ್ಸಿಡೆಂಟ್ಸ್ ಇರೋದ್ರಿಂದ ಅದು ಹಲವು ಖಾಯಿಲೆಗಳಿಗೆ ರಾಮಬಾಣ ಅಂತ ಬೆನೆಟ್ ಪ್ರತಿಪಾದಿಸಿದ್ದ. ಅದರಿಂದಲೇ ಡಯೇರಿಯಾ, ಜಾಂಡೀಸ್‍ನಂಥಾ ಕಾಯಿಲೆಯನ್ನೂ ಗುಣಪಡಿಸಿದ್ದ. ಬಹುಶಃ ಯಾರೋ…

Read More

ಗೆಲ್ಲಲೇ ಬೇಕೆಂಬ ಛಲದ ಹಾದಿಗೆ ಕಾಲೂರಿದವರು ಯಾವತ್ತಿದ್ದರೂ ಗೆದ್ದೇ ಗೆಲ್ತಾರೆ. ಅಡಿಗಡಿಗೆ ನಸೀಬು ಕಣ್ಣಾಮುಚ್ಚಾಲೆಯಾಡಿದ್ರೂ ಗೆಲುವೆಂಬುದು ದಕ್ಕಿಯೇ ತೀರುತ್ತೆನ್ನೋದಕ್ಕೆ ಸಾಕಷ್ಟು ಉದಾಹರಣೆಗಳಿದ್ದಾವೆ. ಯಾರದ್ದೋ ಶ್ರಮಕ್ಕೆ ವಾರಸೂದಾರರಾಗೋರ ಗೆಲುವು ನೀರ ಮೇಲಿನ ಗುಳ್ಳೆಯಿದ್ದಂತೆ. ಆ ಕ್ಷಣಕ್ಕದು ಆಕರ್ಷನೀಯವಾಗಿ ಕಂಡರೂ ಅದು ಹೆಚ್ಚು ಕಾಲ ಉಳಿಯುವಂಥಾದ್ದಲ್ಲ. ಆದರೆ ಅಗಾಧ ಪರಿಶ್ರಮಕ್ಕೊಲಿಯೋ ಗೆಲುವು ಸಾವಿನಲ್ಲೂ ಕೈ ಹಿಡಿಯುತ್ತೆ. ಈ ಮಾತು ನಿಮಗೆ ಉತ್ಪ್ರೇಕ್ಷೆ ಅನ್ನಿಸೀತೇನೋ. ಆದ್ರೆ ಈ ಸ್ಟೋರಿ ಕೇಳಿದ್ರೆ ಖಂಡಿತಾ ನಿಮ್ಮ ಮನಸ್ಥಿತಿ ಬದಲಾಗುತ್ತೆ. ಅಂದಹಾಗೆ ಈಗ ಹೇಳ ಹೊರಟಿರೋ ಕಥೆ ಜನಪ್ರಿಯ ಜಾಕಿಯೊಬ್ಬನದ್ದು. ಕುದುರೆ ರೇಸ್ ಅನ್ನೋದು ಇಡೀ ಜಗತ್ತಿನ ತುಂಬೆಲ್ಲ ಕ್ರೇಜ್ ಇರುವಂಥಾದ್ದು. ಅದರ ಹಿನ್ನೆಲೆಯಲ್ಲಿರೋ ಜೂಜು ಅನೇಕರ ಬದುಕನ್ನ ಬರ್ಬಾದು ಮಾಡಿದ್ರೂ ಕುದುರೆ ರೇಸಿನ ಜಾಕಿಗಳಿಗೆ ಗೆಲುವ ಶ್ರಮಕ್ಕಷ್ಟೇ ದಕ್ಕುತ್ತೆ. ಈ ಮಾತಿಗೆ ಜಾಕಿ ಫ್ರಾಂಕ್ ಹೇಯ್ಸ್ ತಾಜಾ ಉದಾಹರಣೆ. ಫ್ರಾಂಕ್ ಹೇಯ್ಸ್ ಕುದುರೆ ರೇಸ್ ಪ್ರಿಯರಿಗೆಲ್ಲ ಪರಿಚಿತ ಹೆಸರು. ಈತ ಕುದುರೆ ಜಾಕಿಯಾಗಿ ಹಲವಾರು ವರ್ಷಗಳ ಕಾಲ ಶ್ರಮ…

Read More

ಹುಡುಗೀರು ಹೈ ಹೀಲ್ಸ್ ಚಪ್ಪಲಿ ಹಾಕಿಕೊಂಡು ಓಡಾಡೋದು ಆಧುನಿಕ ಜಗತ್ತಿನ ಫ್ಯಾಷನ್. ಹಾಗೆ ಹೆಣ್ಣುಮಕ್ಕಳು ಹೈ ಹೀಲ್ಸ್ ತೊಟ್ಟು ಬಳುಕುತ್ತಾ ನಡೆದಾಡುತ್ತಿದ್ದರೆ ಗಂಡೈಕಳ ಹೃದಯದ ಬಡಿತ ರೊಮ್ಯಾಂಟಿಕ್ ಆಗಿ ಲಯ ಹಿಡಿಯಲಾರಂಭಿಸುತ್ತೆ. ಈ ಹೈ ಹೀಲ್ಸ್ ಅನ್ನೋದು ಹೈ ಫೈ ಕಲ್ಚರ್ ಮತ್ತು ದೊಡ್ಡಸ್ತಿಕೆಯ ಸಂಕೇತದಂತೆಯೂ ಬಿಂಬಿತವಾಗಿದೆ. ಅದೇ ರೀತಿ ಅದೀಗ ಹೆಂಗಳೆಯರ ಪಾಲಿಗೆ ಸ್ವಂತದ್ದಾಗಿದೆ. ಸುಮ್ಮನೊಂದು ಸಲ ಗಂಡಸರು ಹೈ ಹೀಲ್ಸ್ ಹಾಕೊಂಡು ಓಡಾಡೋದನ್ನೊಮ್ಮೆ ಕಲ್ಪಿಸಿಕೊಳ್ಳಿ. ನಗುವಿನ ಪಟಾಕಿಗೆ ಕೊಳ್ಳಿಯಿಟ್ಟಂತಾಗುತ್ತಲ್ಲಾ? ಆದ್ರೆ ವಾಸ್ತವ ಅನ್ನೋದು ನಮ್ಮ ಆಲೋಚನೆ, ಮನಸ್ಥಿತಿಗಳಿಗೆ ವಿರುದ್ಧವಾಗಿದೆ. ಯಾಕಂದ್ರೆ ಒಂದಾನೊಂದು ಕಾಲದಲ್ಲಿ ಗಂಡಸರು ಹೈ ಹೀಲ್ಸ್ ಹಾಕ್ತಿದ್ರು ಅಂದ್ರೆ ನಂಬಲೇ ಬೇಕು. ಅಷ್ಟಕ್ಕೂ ಈ ಹೈ ಹೀಲ್ಸ್ ಅನ್ನ ಅನ್ವೇಷಣೆ ಮಾಡಿದ್ದದ್ದು ಕೂಡಾ ಪುರುಷರೇ. ಅದರ ಹಿಂದೊಂದು ಇಂಟರೆಸ್ಟಿಂಗ್ ಕಥೆಯೇ ಇದೆ. ಈ ಜಗತ್ತಿನ ಬಹುತೇಕ ಅನ್ವೇಷಣೆಗಳಾಗಿರೋದು ಆಯಾ ಕಾಲದ ತುರ್ತಿಗನುಗುಣವಾಗಿದೆ. ಹೈ ಹೀಲ್ಸ್ ಅನ್ನ ಪುರುಷರು ಆವಿಷ್ಕರಿಸಿದ್ದರ ಹಿಂದಿರೋದೂ ಅಂಥಾದ್ದೇ ಅನಿವಾರ್ಯತೆ. ಯುರೋಪ್ ಸೀಮೆಯಲ್ಲಿ ಹತ್ತನೇ…

Read More

ಇದು ನಂಬಲು ಕಷ್ಟವಾದ್ರೂ ನಂಬಲೇ ಬೇಕಾದ ವಿಚಾರ. ನೀರು ಸಂಜೀವಿನಿ. ಮನುಷ್ಯರು, ಪ್ರಾಣಿಗಳು ಸೇರಿದಂತೆ ಸಕಲ ಜೀವಿಗಳೂ ನೀರಿನಿಂದ ಬದುಕಿಕೊಳ್ಳುತ್ವೆ. ಒಂದು ವೇಳೆ ಒಂದಷ್ಟು ಹೊತ್ತು ಆಹಾರವಿಲ್ಲದಿದ್ದರೂ ನೀರು ಕುಡಿದೇ ಉಸಿರುಳಿಸಿಕೊಳ್ಳೋ ಸಾಧ್ಯತೆಗಳಿವೆ. ಆದ್ರೆ ಅತಿಯಾದ್ರೆ ಅಮೃತವೂ ವಿಷವಾಗಬಲ್ಲುದೆಂಬ ಗಾದೆಯೇ ಇದೆ. ಹಾಗಿರೋವಾಗ ಅತಿಯಾಗಿ ಕುಡಿದ್ರೆ ನೀರೂ ಕೂಡಾ ನಮ್ಮ ದೇಹಕ್ಕೆ ವಿಷವಾಗೋದ್ರಲ್ಲಿ ಅಷ್ಟೇನೂ ಅಚ್ಚರಿ ಕಾಣೋದಿಲ್ಲ. ಆದ್ರೆ ನಾವೆಲ್ಲರೂ ಎಷ್ಟು ನೀರು ಕುಡಿದ್ರೂ ಒಳ್ಳೇದೆಂಬ ಸೂತ್ರಕ್ಕೆ ಕಟ್ಟು ಬಿದ್ದಿರುತ್ತೇವೆ. ಕಡಿಮೆ ನೀರು ಕುಡಿದ್ರೆ ಮನೆ ಮಂದಿಯೇ ಗದರ್ತಾರೆ. ಆರೋಗ್ಯದ ಬಗ್ಗೆ, ನೀರಿನಿಂದಾಗೋ ಪ್ರವಚನಗಳ ಬಗ್ಗೆ ಭಾಷಣ ಬಜಾಯಿಸ್ತಾರೆ. ಆದ್ರೆ ಹೆಚ್ಚಿನವ್ರಿಗೆ ಅತಿಯಾಗಿ ಕುಡಿದ್ರೆ ನೀರೂ ಕೂಡಾ ಡೇಂಜರಸ್ ಅನ್ನೋ ವಿಚಾರ ಗೊತ್ತಿರಲಿಕ್ಕಿಲ್ಲ. ಅದು ಎಷ್ಟು ಅಪಾಯಕಾರಿ ಅಂದ್ರೆ ಪ್ರಾಣವನ್ನೇ ತೆಗೆದು ಬಿಡುವಷ್ಟು. ಪ್ರತಿಯೊಬ್ಬರೂ ದಿನನಿತ್ಯ ಒಂದಷ್ಟು ನೀರು ಕುಡಿಯೋದು ಉತ್ತಮ ಅನ್ನೋದು ಗೊತ್ತಿರುವಂಥಾದ್ದೇ. ದಿನಕ್ಕೆ ಐದಾರು ಲೀಟರ್ ನೀರು ಕುಡಿದ್ರೂ ಒಳ್ಳೇದೇ. ಜೀರ್ಣ ಕ್ರಿಯೆಯೂ ಸೇರಿದಂತೆ ಎಲ್ಲ ಕ್ರಿಯೆಗಳನ್ನೂ ನೀರು…

Read More